Episodes
ಮಕ್ಕಳೆಂದರೆ ಕುತೂಹಲ , ಕುತೂಹಲ ಅಂದರೆ ಮಕ್ಕಳು .  ದುಬಾರಿಯಾದ ಆಟದ ಸಾಮಾನಿರಲಿ ,  ಮೂಲೆಯಲ್ಲಿ ಬಿದ್ದಿರೋ  ಕಲ್ಲಿರಲಿ , ಮಕ್ಕಳಿಗೆ  ಎಲ್ಲವೂ ಆಕರ್ಷಕ ಅಂತಲೇ ತೋರುತ್ತದೆ .  ಒಮ್ಮೆ , ಶಾಲೆಯಲ್ಲಿ ಆಟ ಆಡ್ತಿದ್ದ ಮಕ್ಕಳಿಗೆ ಒಂದು ವಿಚಿತ್ರ ಪ್ರಾಣಿ ಕಣ್ಣಿಗೆ ಬಿತ್ತು .  ಕೊಂಬೆಯಿಂದ ಕೊಂಬೆಗೆ ಜಿಗಿಯುತ್ತಿದ್ದ ಈ ಪ್ರಾಣಿಯು ಮಕ್ಕಳಿಗೆ ಆಟದ ಸಾಮಾನಿನ ತರಹ ತೋರಿತು .  ಪ್ರಾಣಿಯನ್ನು  ಮಕ್ಕಳು ಏನು ಮಾಡಿದರು ?  ಬನ್ನಿ , ಈ ಕತೆಯಲ್ಲಿ ತಿಳಿಯೋಣ . 
Published 07/19/21
ಕಥೆಯ ಶೀರ್ಷಿಕೆ ವಿಚಿತ್ರ ಅನ್ನಿಸುತ್ತಾ ?  ಹೌದು .. ರಾಮಾಯಣದ  ಈ ಅಪರೂಪದ ಕತೆ ಕೇಳೋಕೆ ಬಹು ಮಜಾ . ಜತೆಗೆ , ಹನುಮಂತ ಹಾಗೂ ರಾಮನ ಗೆಳೆತನ ಎಷ್ಟು ಗಾಢವಾಗಿತ್ತು ಅನ್ನುವುದಕ್ಕೆ ಸಾಕ್ಷಿ ಕೂಡ .     
Published 07/11/21
ಕಾಡಿನಲ್ಲಿ  ವಾಸ ಆಗಿದ್ದ  ಕಾಗೆ ಮರಿಗೆ ನೀರಿನಲ್ಲಿ  ಈಜುತ್ತಿದ್ದ  ಬೆಳ್ಳಗೆ ಸುಂದರವಾಗಿದ್ದ  ಹಂಸವನ್ನ  ಕಂಡಾಗ ಒಂಥರಾ ಅಸೂಯೆ ಆಯ್ತು . ಹಾಗೆ , ಸ್ವಲ್ಪ ಭಯ ಕೂಡ ಆಯ್ತು .   ತಕ್ಷಣ ಅಮ್ಮನ ಬಳಿ ಹೋಗಿ , ಹೇಳಿದಾಗ , ಅಮ್ಮ ಹೇಳಿದ್ದೇನು ? ಆಗ ಕಾಗೆ ಮರಿಗೆ ಏನನ್ನಿಸಿತು ?  ಸಂವಿತ್ ಫೌಂಡೇಶನ್ ಅವರ ಸಹಯೋಗದಲ್ಲಿ ಮಾಡಿದ  ಈ ಪುಟ್ಟ  ಕತೆ ಹೇಳುವ ನೀತಿ ಮಾತ್ರ ಬಹಳ ದೊಡ್ಡದು . 
Published 07/04/21
ಕಾಡಿನಲ್ಲಿ  ಆನೆ ಮರಿ ಒಂದು ಹುಟ್ಟಿತು . ಎಲ್ಲ ರೀತಿಯಲ್ಲೂ ಬೇರೆ  ಆನೆಗಳ ಥರಾನೇ ಇದ್ದ ಆನೆ ಮರಿ ನೋಡೋಕೆ ಮಾತ್ರ ನೀಲಿ  ಬಣ್ಣ ಇತ್ತು !.  ಆ ಬಣ್ಣದ ಜತೆ  ಕಾಡಿನಲ್ಲಿ ಬೇರೆ  ಮರಿಗಳ ಜತೆ  ಬೇರೆಯೋಕೆ ಈ  ಆನೆ ಮರಿಗೆ  ಸಾಧ್ಯ  ಆಯಿತೇ  ? 
Published 06/27/21
ರಕ್ಷಿತ್ ಗೆ  ಕಾರುಗಳು ಅಂದರೆ ತುಂಬಾ  ಇಷ್ಟ.  ಒಂದು  ದಿವಸ  ಅವನ  ಅಮ್ಮ ಅವನಿಷ್ಟದ  ಕೆಂಪು  ಕಾರನ್ನ ಗೊತ್ತಿಲ್ಲದೇ ಬಡ ಮಕ್ಕಳಿಗೆ  ದಾನ ಮಾಡಿದಾಗ ರಕ್ಷಿತ್ ಗೆ  ಆದ  ದುಃಖ ಅಷ್ಟಿಷ್ಟಲ್ಲ . ಆಗ ರಕ್ಷಿತ್ ಏನು  ಮಾಡಿದ  ?  ಬನ್ನಿ ಈ ಕತೆ ಕೇಳಿ  ತಿಳಿದುಕೊಳ್ಳೋಣ 
Published 06/20/21
” ಕೇಳಿರೊಂದು ಕಥೆಯ ” ತಂಡ ಬೆಂಗಳೂರಿನ ಸಂವಿತ್ ರಿಸರ್ಚ್ ಫೌಂಡೇಶನ್ ಜತೆ ಸೇರಿ Essential Life Skills ಎಂಬ ಶೀರ್ಷಿಕೆಯಡಿ ಆಡಿಯೋ ಪುಸ್ತಕಗಳನ್ನು  ಮಾಡಿದ್ದೆವು .    ಆ ಸರಣಿಯಲ್ಲಿ ಆಯ್ದ ಕತೆಗಳಲ್ಲಿ  ಈ  ವಾರದ  ಕತೆ  “ರೋಹಿತನ ಸಾಹಸ ” .  ಹೊರಗೆ ಜೋರಾಗಿ ಬೀಳುತ್ತಿದ್ದ ಮಳೆಯಲ್ಲಿ ಯಾವುದೋ ಪ್ರಾಣಿ ಕೂಗುವ ಸದ್ದು ಕೇಳಿಸ್ತು . ಮನೆಯಲ್ಲಿ ಬೇಜಾರು ಮಾಡಿಕೊಂಡು ಕುಳಿತಿದ್ದ ರೋಹಿತ್ ಆಗ ಏನು ಮಾಡಿದ ?    ಕೇಳಿ ಈ ರೋಚಕ ಕಥೆ
Published 06/06/21
" ಕೇಳಿರೊಂದು ಕಥೆಯ " ತಂಡ ಬೆಂಗಳೂರಿನ ಸಂವಿತ್ ರಿಸರ್ಚ್ ಫೌಂಡೇಶನ್ ಜತೆ ಸೇರಿ Essential Life Skills ಎಂಬ ಶೀರ್ಷಿಕೆಯಡಿ ಆಡಿಯೋ ಪುಸ್ತಕಗಳನ್ನು  ಮಾಡಿದ್ದೆವು .    ಆ ಸರಣಿಯಲ್ಲಿ ಆಯ್ದ ಕತೆಗಳಲ್ಲಿ  ಈ  ವಾರದ  ಕತೆ  "ಹೂದಾನಿ " .  ತೇಜಸ್ , ಅಂಕಿತ್ ಹಾಗೂ ದಿವ್ಯ ಮನೆಯಲ್ಲಿ  ಆಟ ಆಡ್ತಿದ್ದಾಗ ಮನೆಯಲ್ಲಿದ್ದ  ಹೂದಾನಿ ( Flower Vase ) ಬಿದ್ಧು ಹೋಗತ್ತೆ .  ಆಗ , ಆ ಮಕ್ಕಳೇನು ಮಾಡಿದರು . ಕೇಳಿ  ಈ ಕುತೂಹಲಕಾರಿ ಕಥೆ . 
Published 05/30/21
ಮರಳುಗಾಡಿನಲ್ಲಿ ವಾಸ ಮಾಡೋ ಒಂಟೆ ಅಸಾಮಾನ್ಯ ಪ್ರಾಣಿ .  ದಿನಗಟ್ಟಲೆ ನೀರಿಲ್ಲದೆ ಬಿಸಿಲಿನಲ್ಲಿ ಇರುವ ಶಕ್ತಿ ಇರುವ ಈ ಪ್ರಾಣಿಯ ಬಗ್ಗೆ ನಮ್ಮ ಪುಟಾಣಿ ಕೇಳಿಗಾರ್ತಿ ಪ್ರಖ್ಯಾ ಇನ್ನಷ್ಟು ವಿಷಯಗಳನ್ನು ಕಥೆಯ ರೂಪದಲ್ಲಿ ನಿರೂಪಿಸಿದ್ದಾಳೆ .   
Published 05/15/21
ಈದ್ ಹಬ್ಬ ಮುಸಲ್ಮಾನರು ಆಚರಣೆ ಮಾಡುವ ಮಹತ್ವದ ಹಬ್ಬಗಳಲ್ಲೊಂದು .  ರಂಜಾನ್ ತಿಂಗಳಲ್ಲಿ ಬರುವ ಈ ಹಬ್ಬದ ಬಗ್ಗೆ ಇನ್ನಷ್ಟು ತಿಳಿಯೋಣ ಬನ್ನಿ !
Published 05/13/21
4 ವರ್ಷದ  ಪುಟ್ಟ  ಕೇಳುಗ ತನಯ್ ತನ್ನ ಮುದ್ದಾದ ದನಿಯಲ್ಲಿ ನಿರೂಪಿಸುವ " ಪಾರಿವಾಳ ಮತ್ತು ಇರುವೆಯ " ಕತೆ .    ಇದರ ಮೂಲ ಕತೆ ಇಲ್ಲಿ ಕೇಳಬಹುದು  - https://kelirondukatheya.org/ep95/
Published 05/09/21
4 ವರ್ಷದ ಕೇಳುಗ ತನಯ್ ತನ್ನ ಮುದ್ದಾದ ದನಿಯಲ್ಲಿ ನಿರೂಪಿಸಿರುವ "ಮಿಸಾಕೊ ಮತ್ತು ಓನಿ " " ಕತೆ .    ಇದರ ಮೂಲ ಕಥೆ ಇಲ್ಲಿ ಕೇಳಬಹುದು  - https://kelirondukatheya.org/misako-and-oni/
Published 05/09/21
4 ವರ್ಷದ ಕೇಳುಗ ತನಯ್ ತನ್ನ ಮುದ್ದಾದ ದನಿಯಲ್ಲಿ "ಸಿಂಹದ  ಮೀಸೆ " ಕಥೆಯನ್ನು ನಿರೂಪಿಸಿ  ಕಳಿಸಿದ್ದಾನೆ . 
Published 05/09/21
Narration of popular story - The woodcutter and the ax by our listener Shravan Jois.    The original story is available at https://kelirondukatheya.org/ep93/ 
Published 05/05/21
A young listener sharing a self narrated cute story called ಕರಡಿ ಕತೆ . 
Published 04/29/21
We get a lot of submissions from our listeners, each of which is special because they took the time to share their special talent.  Once in a while, we get something so unique, it stays with us a long time.    6-year-old Srishti and her mother have collaborated to make this story.  While the story narration is very rhythmic  and almost feels like song, the background effects with Veena make the effort extra special.  Thank you Shruthi avare and also to little Srishti.  
Published 04/16/21
3 ವರ್ಷದ ವಿಹಾ (  Viha Nithundila ) ನಿರೂಪಿಸಿರುವ ".  Rooster Raga ಅನ್ನುವ  ಮುದ್ದಾದ  ಕತೆ .   ಕತೆಯ ಜತೆ ತಂದೆ ತಾಯಿಗಳು ಕೊಟ್ಟಿರುವ Background ಸಂಗೀತ ಮತ್ತೆ ಮತ್ತೆ ಕೇಳಬೇಕು ಅನ್ನಿಸುತ್ತದೆ . 
Published 04/10/21
ಈ ಸಲದ ವಿಶೇಷ ವ್ಯಕ್ತಿ , ಕನ್ನಡತಿ , ಬಾಹ್ಯಾಕಾಶ ವಿಜ್ಞಾನಿ  ಶ್ರೀಮತಿ ಬಿ. ಪಿ . ದಾಕ್ಷಾಯಿಣಿ .  ಮಂಗಳ ಗ್ರಹದ ಬಗ್ಗೆ ಸಂಶೋಧನೆ ಮಾಡಲು 2014ರಲ್ಲಿ  ಭಾರತದ ವಿಜ್ಞಾನಿಗಳು ತಯಾರಿಸಿ, ಹಾರಿಸಿದ ಉಪಗ್ರಹದ ಹೆಸರು "ಮಂಗಳಯಾನ".  ಈ ಮಹತ್ಸಾಧನೆಯ ಹಿಂದೆ ಇದ್ದ ಪ್ರಮುಖ ವಿಜ್ಞಾನಿಗಳಲ್ಲಿ ಶ್ರೀಮತಿ . ಬಿ ಪಿ ದಾಕ್ಷಾಯಿಣಿ ಅವರು ಕೂಡ ಒಬ್ಬರು .  ಈ ಕಂತಿನ  ಇನ್ನೊಂದು ವಿಶೇಷ  ಅಂದರೆ , ದಾಕ್ಷಾಯಿಣಿ ಅವರ ಜತೆ ಮಾತನಾಡುವ ಅವಕಾಶ ಸಿಕ್ಕಿದ್ದು . ಅವರ ದನಿಯಲ್ಲಿ , ಅವರ ಬಾಲ್ಯ , ಓದು , ನೌಕರಿ , ಅವರ ಹವ್ಯಾಸಗಳು ಇವೆಲ್ಲದರ ಬಗ್ಗೆ ತಿಳಿಯುವ ಅವಕಾಶ ಸಿಕ್ಕಿದ್ದು ಸಂತಸದ ಸಂಗತಿ .  ಅಶ್ವಿನಿ ಅವರ ದನಿಯಲ್ಲಿ ಮೂಡಿರುವ...
Published 03/28/21
"ವ್ಯಕ್ತಿ ಪರಿಚಯ " ಸರಣಿಯಲ್ಲಿ  ಈ ಸಲದ  ಪರಿಚಯ "ಹೆಲೆನ್ ಕೆಲ್ಲೆರ್ ". ಹೆಲೆನ್ ಕೆಲ್ಲೆರ್ , ಅತಿ ವಿಶಿಷ್ಟ ಮಹಿಳೆ .  ಕಣ್ಣು , ಕಿವಿ ಕೇಳದೆ ಇದ್ದರೂ ಬಾಯಿ , ಹಾಗೂ ಸ್ಪರ್ಶದ  ( Touch ) ಸಹಾಯದಿಂದ ಕಾಲೇಜು ಶಿಕ್ಷಣ ಪಡೆದವರು .  ನಂತರ , ಪ್ರಪಂಚದಾದ್ಯಂತ  ಲಕ್ಷಾಂತರ ಅಂಗವಿಕಲರಿಗೆ ಸ್ಪೂರ್ತಿಯಾಗಿ ನಿಂತವರು .   ಇವರ ಜೀವನದ ರೋಚಕ ಕತೆ , ಈ ಸಲ "ಕೇಳಿರೊಂದು ಕತೆಯಾ " ದಲ್ಲಿ . 
Published 03/07/21
" ವ್ಯಕ್ತಿ ಪರಿಚಯ " ಸರಣಿಯಲ್ಲಿ ಮುಂದುವರೆಯುತ್ತಾ ಈ ಸಲ ಕನ್ನಡಿಗ ಅನಂತ್ ಪೈ ಅವರ ಬಗ್ಗೆ ತಿಳಿದುಕೊಳ್ತಿದ್ದೇವೆ . ಭಾರತೀಯ ಸಾಹಿತ್ಯದಲ್ಲಿ ಮಕ್ಕಳ ಸಾಹಿತ್ಯಕ್ಕೆ ಸ್ವಲ್ಪ ಕೊರತೆಯೇ . ಅದರಲ್ಲೂ ಪುರಾಣ ಕತೆಗಳನ್ನು ಬಿಟ್ಟರೆ , ಆಧುನಿಕ ಸಾಹಿತ್ಯದಲ್ಲಿ Easy Reading ಆಗಿರುವ  ಮಕ್ಕಳ ಸಾಹಿತ್ಯ ಅತಿ ಕಡಿಮೆ ಅಂತಲೇ ಹೇಳಬೇಕು .  ಈ ಕೊರತೆ ಮನಗಂಡ ಪೈ  ಅವರ ಕೊಡುಗೆ ಭಾರತೀಯ ಮಕ್ಕಳ ಸಾಹಿತ್ಯಕ್ಕೆ ವಿನೂತನ .    
Published 02/21/21
ಲುಡ್ವಿಗ್ ವ್ಯಾನ್ ಬೀಥೋವನ್ ( Ludwig Van Beethoven) , Western Classical ಸಂಗೀತದಲ್ಲಿ ಅತಿ ದೊಡ್ಡ ಹೆಸರು . ಕರ್ನಾಟಕ ಸಂಗೀತದಲ್ಲಿ ಪುರಂದರ ದಾಸರು ಹೇಗೋ , ವಿಶ್ವ ಸಂಗೀತ ಕ್ಷೇತ್ರದಲ್ಲಿ ಬಿಥೋವನ್ ಕೂಡ . ಕ್ಲಾಸಿಕಲ್ ಸಂಗೀತ ಕಲಿಯುವ ಪ್ರತಿಯೊಬ್ಬ ವಿದ್ಯಾರ್ಥಿಯ ಮಹದಾಸೆ ಬಿಥೋವನ್ ಅವರ ಸಿಂಫೊನಿ ಗಳಲ್ಲಿ ನುಡಿಸಬೇಕು ಅನ್ನುವುದು .  ಅತ್ಯುತ್ತಮ Composer ಆಗಿದ್ದ ಬೀಥೋವನ್ ಕಿವುಡ ಹಾಗೂ ಮೂಕನಾಗಿದ್ದ ಅಂದರೆ ಆಶ್ಚರ್ಯ ಆಗುತ್ತೆ ಅಲ್ವಾ ?  ಈ ವಾರದ "ವ್ಯಕ್ತಿ ಪರಿಚಯ " ಸರಣಿಯಲ್ಲಿ ಬೀಥೋವನ್ ಬಗ್ಗೆ ಇನ್ನಷ್ಟು ತಿಳಿಯೋಣ ಬನ್ನಿ .    ಬೀಥೋವನ್ ಅವರ ಇನ್ನೂ ಕೆಲವು ಚಿತ್ರಗಳು , ಹಾಗೂ ಅವರ ಸಂಗೀತದ...
Published 02/14/21
"ವ್ಯಕ್ತಿ ಪರಿಚಯ " ಸರಣಿಯ  ಮೊದಲನೇ ಕಂತು .  ಪ್ರಸಿದ್ಧ ವ್ಯಕ್ತಿಗಳ ಜೀವನದ ತುಣುಕುಗಳನ್ನು   ಮಕ್ಕಳಿಗೆ ಅವರದೇ  ರೀತಿಯಲ್ಲಿ  ತಿಳಿ ಹೇಳುವ ಪ್ರಯತ್ನ  ಇದು .   ಈ ಸಲದ ವ್ಯಕ್ತಿ ಪ್ರಪಂಚದೆಲ್ಲೆಡೆ "Confident Mary " ಅಂತಲೇ ಕರೆಸಿಕೊಂಡ ಬಾಕ್ಸಿಂಗ್ ಚಾಂಪಿಯನ್ ಮೇರಿ ಕೋಮ್ .  ಮೇರಿ ಬಾಕ್ಸಿಂಗ್ ನಲ್ಲಿ  ಎಷ್ಟು ಪ್ರಸಿದ್ದರೋ ಅವರ ಹಿನ್ನಲೆ  ಕೂಡ ಅಷ್ಟೇ ರೋಚಕವಾದದ್ದು .  http://kelirondukatheya.org/stories/ep112 ರಲ್ಲಿ ಮೇರಿ ಅವರ  ಕೆಲವು  ಚಿತ್ರಗಳನ್ನೂ , ಅವರ  ಬಗ್ಗೆ ಇನ್ನೂ  ಕೆಲವು ವಿಷಯಗಳನ್ನು ತಿಳಿದುಕೊಳ್ಳಬಹುದು . 
Published 02/07/21
ಸೂರ್ಯ ಚಂದ್ರರು ಒಂದು  ಕಾಲದಲ್ಲಿ  ನಮ್ಮ  ನಿಮ್ಮ  ಥರ  ಭೂಮಿಯ ಮೇಲೆ ಇದ್ರಂತೆ . ! . ಆಶ್ಚರ್ಯ ಆಗುತ್ತಲ್ಲಾ ?  ಹೌದು , ಸೂರ್ಯ ಚಂದ್ರರು ಮನುಷ್ಯರ ಥರ  ಮನೆಯಲ್ಲಿ  ಇರ್ತಿದ್ರು ಅಂತ  ಆಫ್ರಿಕನ್ನರು  ನಂಬುತ್ತಾರಂತೆ .  ಹಾಗಾದ್ರೆ , ಈಗ್ಯಾಕೆ ಆಕಾಶದಲ್ಲಿ  ಇರ್ತಾರೆ ? ತಿಳಿಯೋಕೆ , ಈ ಕತೆ  ಕೇಳಿ . 
Published 01/24/21
ಸಿಡುಕ ಸಿದ್ದನಿಗೆ ಸಿಟ್ಟು ಎಷ್ಟು ಜಾಸ್ತಿಯೋ ಪೆದ್ದುತನ ಸ್ವಲ್ಪ ಅದಕ್ಕಿಂತ ಜಾಸ್ತಿ.  ಈ ಕತೆಯಲ್ಲಿ ಸಿದ್ಧನಿಗೆ ಗುಹೆಯ ಮನುಷ್ಯನಿಂದ ಊಹಿಸಲಾರದಷ್ಟು ಐಶ್ವರ್ಯ ಸಿಕ್ಕರೂ, ಪಾಪ ಅದನ್ನು ಉಳಿಸಿಕೊಳ್ಳೋಲಾಗಲಿಲ್ಲ. ಹೇಗೆ, ಯಾಕೆ ಅನ್ನುವುದನ್ನು ಕತೆಯಲ್ಲಿ ಕೇಳೋಣ.   ನಮಗೆ ಎಷ್ಟು ಅನುಭವ ಇದೆಯೋ ಅಷ್ಟೇ ದಕ್ಕುವುದು ಅನ್ನುವುದಕ್ಕೆ ಈ ಕತೆ ಉತ್ತಮ ಉದಾಹರಣೆ.
Published 01/10/21
ಕೇಳಿರೊಂದು  ಕಥೆಯ  ಸರಣಿಯ  ಕತೆಗಳಲ್ಲಿ  ನಾಸ್ರುದ್ದೀನ್  ಹೊಡ್ಜಾನ ಕತೆಗಳು ಅತಿ  ಜನಪ್ರಿಯ.  2019 ರಲ್ಲಿ ಪ್ರಕಟವಾಗಿದ್ದ  ಈ ಕತೆಯ ಮರು  ಪ್ರಸಾರ .  ನಾಸ್ರುದ್ದೀನ್ ಹೊಡ್ಜ ಪಕ್ಕದ ಮನೆಯವನ ಹತ್ತಿರ ಪಾತ್ರೆ ಸಾಲ ಪಡೆದು ವಾಪಸ್ ಕೊಡುವಾಗ ಪಾತ್ರೆ ಅಷ್ಟೇ ಅಲ್ದೆ ಅದರ 'ಮರಿ ' ಯನ್ನೂ ಹೇಗೆ ಕೊಡಲು ಸಾಧ್ಯ ? ಪಾತ್ರೆ ಎಲ್ಲಾದ್ರೂ ಮರಿ ಇಡುತ್ಯೆ ? ಆದರೆ ' ಕೊಟ್ಟೋನು ಕೋಡಂಗಿ! ಇಸ್ಕೊಂಡೋನು ಈರಭದ್ರ " ಅನ್ನೋ ಗಾದೆಯ ಹಾಗೆ , ಆ ಪಕ್ಕದ ಮನೆಯವನಿಗಾದ್ರೂ ಗೊತ್ತಾಗಬೇಡವೇ  ?  ಹೊಡ್ಜ ಯಾಕೆ ಹೀಗೆ ಮಾಡಿದ , ಮುಂದೇನಾಯ್ತು ಅನ್ನೋದನ್ನು ಈ ಕತೆಯಲ್ಲಿ ಕೇಳಿ  .   
Published 12/27/20