Episodes
ಹಸುಗಳಿಗೂ ಅವುಗಳ ಸುತ್ತ ಸದಾ ಜುಯ್ ಅಂತ ಸುತ್ತುವ ನೊಣಗಳಿಗೂ ಅದೇನೋ ವಿಚಿತ್ರ ಸಂಬಂಧ . ವೈಜ್ಞಾನಿಕವಾಗಿ ನೊಣಗಳಿಂದ ಕಣ್ಣಿನ ರೋಗ  ( Pink Eye ) ಬರುವುದು ಸಹಜವಾದರೂ ,  ಆಫ್ರಿಕಾದ ಜಾನಪದ ಕತೆಗಳ ಪ್ರಕಾರ ನೊಣಗಳು ತೊಂದರೆ ಕೊಡುವುದಕ್ಕೆ ಹಸುಗಳೇ ಕಾರಣವಂತೆ .  !  
Published 12/14/20
ಬಾವಲಿ ( Bat ) ವಿಚಿತ್ರ  ಹಾಗೂ ಕುತೂಹಲಕಾರಿ ಜೀವಿ . ಅತ್ತ ಪ್ರಾಣಿಯೂ ಅಲ್ಲದೆ , ಇತ್ತ ಹಕ್ಕಿಯೂ ಅಲ್ಲದ ಬಾವಲಿ ರಾತ್ರಿ ಅಷ್ಟೇ ಹೊರ ಬರುತ್ತವೆ .  ವೈಜ್ಞಾನಿಕವಾಗಿ ಬಾವಲಿಗಳಿಗೆ ದೃಷ್ಟಿ ಅಷ್ಟು ಬಲವಾಗಿ ವೃದ್ಧಿಯಾಗಿಲ್ಲ , ಬದಲಾಗಿ Echo location , ಅಂದರೆ ಸೂಕ್ಷ್ಮ ಧ್ವನಿ  ತರಂಗಗಳ ನೆರವಿನಿಂದ ದಾರಿ , ಊಟ  ಹುಡುಕುತ್ತವೆ  . ನೂರಾರು ವರ್ಷಗಳ ಹಿಂದೆ ಆಫ್ರಿಕಾದ ಜನರಿಗೆ ಈ ಬಾವಲಿ ರಾತ್ರಿಯಷ್ಟೇ ಹೊರಗೇಕೆ ಬರುತ್ತದೆ ಅನ್ನುವ ಪ್ರಶ್ನೆಗೆ  ಸೊಗಸಾದ ಕತೆಯ ಮೂಲಕ ವಿವರಿಸಿದ್ದಾರೆ .   ಕೇಳೋಣ ಬನ್ನಿ .   
Published 11/28/20
ದೀಪಾವಳಿ ಹಬ್ಬದ ಶುಭಾಶಯಗಳು ಎಲ್ಲರಿಗೂ ಗೆಳೆಯರೇ .   ದೀಪಾವಳಿ ಭಾರತೀಯರಿಗೆ ವಿಶೇಷ ಹಬ್ಬ . ಈ ಹಬ್ಬದ ಹಿಂದೆ ಬಹಳಷ್ಟು ಉಪಕತೆಗಳಿವೆ .  ಈ ಕಂತಿನಲ್ಲಿ ಈ ಹಬ್ಬದ ಬಗ್ಗೆ  ಮೂರು ಕತೆಗಳನ್ನು  ಕೇಳೋಣ .    
Published 11/14/20
ಗುಡುಗು , ಸಿಡಿಲು ಮಳೆಗಾಲದಲ್ಲಿ ಸರ್ವೇ ಸಾಮಾನ್ಯ .  ಗುಡುಗು ಕೇಳುವ ಮೊದಲೇ ಸಿಡಿಲು ಕಾಣುವುದೂ ಸಾಮಾನ್ಯ .  ಆದರೆ , ಸಾವಿರಾರು ವರ್ಷಗಳ ಹಿಂದೆಯೇ  ಇದನ್ನು ಮನಗಂಡು ಗುಡುಗು , ಸಿಡಿಲಿನ ಸುತ್ತ ಹೆಣೆದಿರುವ ಈ ಕತೆ ,  ಸಿಡಿಲನ್ನು ಚೂಟಿ ಟಗರಿಗೂ ,  ಗೂಡುಗನ್ನು  ಮಗನನ್ನು ಸರಿ ಹಾದಿಗೆ  ತರುವ ಅಮ್ಮನಿಗೂ  ಹೋಲಿಸುವ  ಮೂಲಕ ಕೇಳುವುದಕ್ಕೆ  ವಿಶಿಷ್ಟ  ಅನುಭವ  ಕೊಡುತ್ತದೆ .    Thunder and Lightning are common phenomena. This folktale compare lightning to a mischievous Ram and the thunder as the mom that follows her son around scolding him for his mischiefs.  A...
Published 11/01/20
ಸುಳ್ಳು ಹೇಳುವುದು ಅಂದರೆ ಸಹಜ . ಅದರಲ್ಲೂ , ಕೆಲವರಿಗೆ ಸುಳ್ಳು ಹೇಳುವುದು ಚಟ ವಾಗಿ ಬಿಟ್ಟಿರುತ್ತದೆ . ಹಾಗಿರುವಾಗ , ಒಂದೂ ಸುಳ್ಳು ಹೇಳದೆ ಇರುವ  ಮನುಷ್ಯ  ಒಬ್ಬ  ಬದುಕಿದ್ದ  ಅಂದರೆ ಆಶ್ಚರ್ಯ  ಆಗುತ್ತೆ  ಅಲ್ವಾ ?  ಈ ಕತೆಯಲ್ಲಿ ಆ ಮನುಷ್ಯನನ್ನ  ಭೇಟಿ ಮಾಡೋಣ . ಅವನಿಂದ ಸುಳ್ಳು ಹೇಳಿಸೋಕೆ ಪಾಡು ಪಟ್ಟ ರಾಜನ ಬಗ್ಗೆಯೂ ಕೇಳೋಣ 
Published 10/18/20
ಕಳೆದ  ವಾರ ಇದೇ  ಕತೆಯ ಸರಳ  ಗನ್ನಡ  ಅವತರಣಿಕೆ ( version ) ಅನ್ನು ಮಾಡಿದ್ದೆವು . ಈ ವಾರ , ಜೈರಾಜ್ ಗಲಗಲಿ ಅವರು ಈ ಕತೆಯನ್ನು ಉತ್ತರ ಕರ್ನಾಟಕ ಶೈಲಿ ಒಳಗ ಹೇಳಿದ್ದಾರೆ .  ನೀವೂ , ನಾವೂ ಕೇಳಿ  ಮಜಾ ತಗಳ್ಳೋಣಾಂತ ? ಏನಂತೀರಿ ? 
Published 10/11/20
ಪಂಚತಂತ್ರದ ಕತೆಗಳಲ್ಲಿ ನರಿ ಬುದ್ದಿವಂತಿಕೆ  ಹಾಗೂ ಕಪಟತನಕ್ಕೆ ಹೆಸರುವಾಸಿ . ಆಫ್ರಿಕಾದ ಜಾನಪದ ಕತೆಗಳಲ್ಲಿ  ತೋಳಕ್ಕೆ ನರಿಯ ಸ್ಥಾನ .   ಈ ಕತೆಯಲ್ಲಿ ಹಿಂದೆ ತೋಳದಿಂದ ಆದ ಮೋಸ ಮರೆಯದ ಸಿಂಹಕ್ಕೆ ತೋಳ ಮತ್ತೆ ಸಿಕ್ಕಿ  ಬೀಳುತ್ತದೆ . ತೋಳ ಸಿಂಹದಿಂದ ಪಾರು ಹೇಗೆ ಆಗುತ್ತದೆ ಅನ್ನುವುದನ್ನು ಕೇಳೋಣ . 
Published 10/04/20
ಆಫ್ರಿಕಾದಲ್ಲಿ  ತಮಟೆಯ ಆಕಾರದಲ್ಲಿರೋ ಸೋರೆಕಾಯಿ ಸಿಗುತ್ತದೆ . ಸೋರೆಕಾಯಿಯ ಉಪಯೋಗ ಕೂಡ  ಹತ್ತು  ಹಲವು  ರೀತಿಯಲ್ಲಿ .  ಅಡುಗೆಯಂತೂ  ಹೌದು , ಆದರೆ ಅಲ್ಲಿನ ಜನರು ಸೋರೆಕಾಯಿಯನ್ನು  ಒಣಗಿಸಿ , ತಿರುಳು ತೆಗೆದು , ಅದನ್ನು ನೀರು ತುಂಬುವ  ಬಿಂದಿಗೆಯಾಗಿ , ಸಾಮಗ್ರಿ  ತುಂಬಿಡುವ ಪಾತ್ರೆಯಾಗಿ ಉಪಯೋಗಿಸುತ್ತಾರೆ .  ಈ ಸೋರೆಕಾಯಿಯ ಬಗ್ಗೆ ಕೂಡ ಜನಪದ ಕತೆ ಇದೆ ಅಂದರೆ ಆಶ್ಚರ್ಯ ಆಗುತ್ತೆ ಅಲ್ವೇ .   ಈ ಕತೆಯಲ್ಲಿ , ಮಕ್ಕಳಿಲ್ಲದ ಹೆಣ್ಣು ಮಗಳಿಗೆ ಸೋರೆಕಾಯಿಯ ಬೀಜಗಳಿಂದ ಮಕ್ಕಳು ಹುಟ್ಟಿದ  ರೋಚಕ ಕತೆ ಕೇಳೋಣ . 
Published 09/27/20
ಹಕ್ಕಿಗಳಿಗೆ ಸಿಂಹ ನಂತೆ ರಾಜ ಒಬ್ಬನಿದ್ದರೆ ಹೇಗಿರ್ತಿತ್ತು ಅನ್ನುವ ಪ್ರಶ್ನೆಯನ್ನು  ಕತೆಯ ರೂಪದಲ್ಲಿ ಸೊಗಾಸಾಗಿ ವಿವರಿಸುತ್ತದೆ  ಈ ಕತೆ 
Published 09/20/20
ಆಫ್ರಿಕಾದ ಜಾನಪದ ಕತೆಗಳು ಮನುಷ್ಯ ತನ್ನ ಸುತ್ತ ಮುತ್ತಲಿನ ಪ್ರಾಣಿ , ಪಕ್ಷಿ , ಪರಿಸರವನ್ನು  ಅರ್ಥ ಮಾಡಿಕೊಂಡ  ಬಗೆಯನ್ನು  ತಮ್ಮದೇ ರೀತಿಯಲ್ಲಿ ಹಿಡಿದಿಡುತ್ತವೆ .   ಆದರೆ , ಈ ಕತೆಗಳು ಹೇಗೆ ಹುಟ್ಟಿದವು ಅನ್ನುವುದಕ್ಕೂ ಒಂದು ಕತೆ ಇದೆ ಅಂದರೆ ಆಶ್ಚರ್ಯ ಆಗುತ್ತೆ ಅಲ್ವಾ ?  ಹೆಚ್ಚು ತಿಳಿಯಲು  ಈ ವಾರದ ಕತೆ ಕೇಳಿ . 
Published 09/13/20
"ಆಫ್ರಿಕಾದ ಜಾನಪದ ಕತೆಗಳು " ಮಾಲಿಕೆಯಲ್ಲಿ ಈ ಕತೆ ಮೊದಲನೆಯದು . ಒಟ್ಟು ನಾವು ಮಾಡಿದ ಕತೆಗಳಲ್ಲಿ ಒಂದು ನೂರನೆಯದು ಕೂಡ .  ಮತ್ತೊಂದು ವಿಶೇಶ - ಈ ಕತೆ ಖ್ಯಾತ ಗಾಯಕಿ , ಕಲಾವಿದೆ ಶ್ರೀಮತಿ ಎಂ ಡಿ ಪಲ್ಲವಿ ಅವರ ನಿರೂಪಣೆ .    ಅನಾಂಸಿ ಅನ್ನುವ ಜೇಡರ ಹುಳು ಪ್ರಪಂಚದ ವಿವೇಕ , ಬುದ್ದಿ ಶಕ್ತಿಯನ್ನೆಲ್ಲ ಒಟ್ಟು ಮಾಡಿ ಮಡಿಕೆಯಲ್ಲಿ ಕೂಡಿಟ್ಟು ಕೊಂಡಾಗ ಆಗಿದ್ದೇನು ? ಮುಂದಿನದನ್ನು ಪಲ್ಲವಿಯವರ ದನಿಯಲ್ಲೇ ಕೇಳಿ . 
Published 09/06/20
ಈ ಸಲದ ಕತೆ ಉತ್ತರ ಕರ್ನಾಟಕ ಶೈಲಿಯಲ್ಲಿ  ನಿರೂಪಿಸಿರುವ ರಾಜನೊಬ್ಬನ  ಕತೆ .  ರಾಜನಿಗೆ ಏನು ಮಾಡಿದರೂ ರಾತ್ರಿ  ನಿದ್ರೆ ಬರುತ್ತಿರಲಿಲ್ಲ .  ಎಷ್ಟೇ ಮದ್ದು , ಗುಳಿಗೆ  ತಿಂದರೂ , ವ್ರತ , ದಾನ ಮಾಡಿದರೂ ನಿದ್ರೆ ಮಾತ್ರ ದೂರವೇ  ಉಳಿದಿತ್ತು .  ಅಷ್ಟೆಲ್ಲ ಕಷ್ಟ ಪಟ್ಟರೂ ಗುಣವಾಗದ ರಾಜನ ನಿದ್ರೆ ಖಾಯಿಲೆಯನ್ನ   ಒಬ್ಬ ಸಾಮಾನ್ಯ ಮರ ಕಡಿಯುವವ ಗುಣ ಪಡಿಸಿದ್ದು ಹೇಗೆ . ?    "ಮಂಗ್ಯಾ , ಮೊಸಳಿ ಕತಿ " ಆದಮೇಲೆ ಉತ್ತರ ಕರ್ನಾಟಕ ಶೈಲಿಯಲ್ಲಿ ನಿರೂಪಿಸಿರುವ ಎರಡನೇ ಕತೆ ಇದು . 
Published 08/29/20
ಈ ಕಂತು ೨೦೧೯ ರ ಗಣೇಶ ಹಬ್ಬದ ಸಮಯದಲ್ಲಿ ಮಾಡಿದ ಕತೆ .   ಈ ವರ್ಷದ ಗೌರಿ ಗಣೇಶ ಹಬ್ಬಕ್ಕೆ ಶಮಂತಕ ಮಣಿಯ ಕತೆ . 
Published 08/22/20
ಏನು ? ಸಿಂಹದಂಥ  ಬಲಿಷ್ಠ  ಪ್ರಾಣಿ  ಎಲ್ಲಿ ? ಮೊಲದಂಥ  ಪೀಚು  ಪ್ರಾಣಿ  ಎಲ್ಲಿ ?  ಆದರೂ ಸಿಂಹದ ಶಕ್ತಿಯ ಮುಂದೆ ಮೊಲದ  ಯುಕ್ತಿಯೇ ಮೇಲಾಯಿತು .  ಒಂದೊಂದು ಸಲ ನಮ್ಮ  ಮುಂದೆ  ಕೆಟ್ಟದ್ದು  ನಡೆಯುತ್ತಿದ್ದರೂ , ಅಸಹಾಯಕರಾಗುವುದು ಸಹಜ . ಅದರಲ್ಲೂ ಎದುರಾಳಿ ಬಲಿಷ್ಠನಾಗಿದ್ದರಂತೂ , ಇನ್ನೇನು ಎಲ್ಲ ಮುಗಿದೇ ಹೋಯಿತು ಅನ್ನಿಸುವಾಗ , ಈ  ಕತೆ ಸ್ಫೂರ್ತಿ ಕೊಡುತ್ತದೆ . 
Published 08/09/20
" ಟೋಪಿ ಬೇಕಾ ಟೋಪಿ " ಅಂತ  ಕೂಗುತ್ತಾ  ಬರುವ  ಟೋಪಿ ಮಾರುವವನ ಕತೆ  ಶಾಲೆಗಳಲ್ಲಿ ನಾಟಕದ ರೂಪದಲ್ಲೋ , ಪಠ್ಯದಲ್ಲೋ ನೋಡದವರು ಕಡಿಮೆ .  ಈಗ  ಈ ಕತೆಯನ್ನು ಈಗಿನ  ಪುಟಾಣಿಗಳೂ ಕೇಳಬಹುದು .  ಟೋಪಿ ಮಾರುವವನ ಟೋಪಿಗಳನ್ನು ಚೇಷ್ಟೆ ಮಂಗಗಳು ಹೊತ್ತುಕೊಂಡು ಮರದ   ಮೇಲೆ ಹತ್ತಿ ಕುಳಿತಾಗ ಟೋಪಿ ಮಾರುವವ  ವಾಪಸ್ ಪಡೆಯೋದಕ್ಕೆ ಏನೆಲ್ಲಾ ಸಾಹಸ  ಮಾಡಬೇಕಾಯ್ತು ಅನ್ನುವುದನ್ನು  ಈ ಕತೆ ತಿಳಿ  ಹಾಸ್ಯದೊಂದಿಗೆ ಹೇಳುತ್ತದೆ .     
Published 08/02/20
ಮಾತು ಹಿತ , ಮಿತವಾಗಿರಬೇಕು ಅನ್ನುತ್ತಾರೆ .  ಜತೆಗೆ ಸಮಯೋಚಿತವಾಗಿರಬೇಕು ಕೂಡ .  ಸಲ್ಲದ  ಜಾಗದಲ್ಲಿ ಬೇಡ ಮಾತುಗಳಾಡಿದರೆ ತೊಂದರೆ ತಪ್ಪಿದ್ದಲ್ಲ ಅನ್ನುವುದಕ್ಕೆ ಈ ಕತೆ ಒಳ್ಳೆಯ ಉದಾಹರಣೆ .  ಸಹಾಯ ಬೇಕಾಗಿದ್ದ ಆಮೆಯೊಂದಕ್ಕೆ , ಬಾತುಕೋಳಿಗಳು ಸಹಾಯ ಮಾಡುವುದಕ್ಕೆ ಮೊದಲು ಒಂದು  ಷರತ್ತು ಹಾಕಿದವು .  ಆಮೇಲೆ ಏನಾಯ್ತು ಅನ್ನೋದನ್ನ ಕತೆಯಲ್ಲಿ  ಕೇಳಿ . 
Published 07/25/20
ಉಪಕಾರ ಮಾಡಿದವರನ್ನು ಇಂದಿಗೂ ಮರೆಯಬಾರದು ಅಂತ  ಗಾದೆಯ ಹಾಗೆ , ಪುಟ್ಟ ಇರುವೆಯೂ , ದೊಡ್ಡ ಪಾರಿವಾಳವೂ ಒಬ್ಬರಿಗೊಬ್ಬರು  ಉಪಕಾರ  ಮಾಡಿದ್ದು  ಹೇಗೆ . ? ಪುಟ್ಟ  ಇರುವೆಯಿಂದ  ದೊಡ್ಡ ಪಾರಿವಾಳಕ್ಕೆ ಆದ  ಉಪಕಾರವಾದರೂ ಏನು . ? ಬನ್ನಿ,  ಈ ಕತೆಯಲ್ಲಿ  ತಿಳಿದುಕೊಳ್ಳೋಣ . 
Published 07/19/20
ಮೊಟ್ಟೆ ಇಡುವ ಕೋಳಿ , ಬಾತು ಕೋಳಿಯ ಬಗ್ಗೆ ಕೇಳಿರ್ತೀರ  , ಆದರೆ ಚಿನ್ನದ ಮೊಟ್ಟಿ ಇಡುವ ಬಾತು ಕೋಳಿಯ ಬಗ್ಗೆ ಕೇಳಿದ್ದೀರಾ ?   ಚಿನ್ನದ ಮೊಟ್ಟೆ ಇಡುವ  ಬಾತು ಕೋಳಿಯನ್ನು  ನೋಡಿ  ರೈತನ  ಹೆಂಡತಿ ಅಸೆ ಪಟ್ಟಿದ್ದೆ ಬೇರೆ , ಆದರೆ ಆದದ್ದೇ ಬೇರೆ .  ದುರಾಸೆ ಪಟ್ಟರೆ ದುಃಖ ತಪ್ಪಿದ್ದಲ್ಲ  ಅನ್ನುವುದಕ್ಕೆ ಈ ಕತೆ ಒಳ್ಳೆಯ  ಉದಾಹರಣೆ .       
Published 07/12/20
ಈ ವಾರ ಮತ್ತೊಂದು ಜನಪ್ರಿಯ ಕತೆ " ಮರ ಕಡಿಯುವವನ ಕತೆ ". ಪಂಚತಂತ್ರದ ಕತೆಗಳು ಅಂದ ತಕ್ಷಣ ನೆನಪು ಬರುವ ಕತೆಗಳಲ್ಲಿ ಈ ಕತೆ ಪ್ರಮುಖವಾದದ್ದು .    ಪ್ರಾಮಾಣಿಕತೆ , ಸತ್ಯ ನಿಷ್ಠತೆ , ಸರಳತೆ ಅಂತಹ ಗುಣಗಳು ಈ ಕತೆಯಲ್ಲಿ ವಿಶೇಷವಾಗಿ ಕಾಣಸಿಗುತ್ತವೆ . 
Published 07/05/20
ದಾರಿ ತಪ್ಪಿಸಿಕೊಂಡ ಮೇಕೆ ಮರಿ ಒಂದು ತೋಳದ ಕೈಗೆ ಸಿಕ್ಕಾಗ , ತುಂಬಾ ಭಯವಾದರೂ , ಸರಿಯಾದ ಸಮಯಕ್ಕೆ ಉಪಾಯವೊಂದನ್ನು ಮಾಡಿ ತೋಳವನ್ನು ಹೆದರಿ ಓಡಿ ಹೋಗುವಂತೆ ಮಾಡ್ತು .   ತೋಳ ಹೆದರಿ ಓಡಿದ್ದು  ಯಾಕೆ ? ಅಂತ ತಿಳಿಯಲು ಈ ಮುದ್ದಾದ ಕತೆ ಕೇಳಿ
Published 06/28/20
ದಾರಿ ತಪ್ಪಿಸಿಕೊಂಡ ಮೇಕೆ ಮರಿ ಒಂದು ತೋಳದ ಕೈಗೆ ಸಿಕ್ಕಾಗ , ತುಂಬಾ ಭಯವಾದರೂ , ಸರಿಯಾದ ಸಮಯಕ್ಕೆ ಉಪಾಯವೊಂದನ್ನು ಮಾಡಿ ತೋಳವನ್ನು ಹೆದರಿ ಓಡಿ ಹೋಗುವಂತೆ ಮಾಡ್ತು .   ತೋಳ ಹೆದರಿ ಓಡಿದ್ದು  ಯಾಕೆ ? ಅಂತ ತಿಳಿಯಲು ಈ ಮುದ್ದಾದ ಕತೆ ಕೇಳಿ .     
Published 06/28/20
ಇಂದಿನ ಸಂಚಿಕೆಯಲ್ಲಿ ಜನಪ್ರಿಯ ಕತೆ "ಆಮೆ ಮತ್ತು ಮೊಲ "ದ ಕತೆ .   ಪ್ರಪಂಚದ ನಾನಾ ಭಾಷೆಗಳಲ್ಲಿ ಹೇಳಪಡುವ ಈ ಕತೆ ಮಕ್ಕಳಿಂದ ದೊಡ್ಡವರ ತನಕ ಎಲ್ಲರೂ ಕೇಳಿ ಖುಷಿ ಪಡಬಹುದಾದದ್ದು .  ನೀವೂ ಕೇಳಿ , ಬೇರೆಯವರಿಗೂ ತಿಳಿಸಿ .  ಕತೆಯನ್ನು ಕೇಳುವ ಅನುಭವವನ್ನು ಇನ್ನಷ್ಟು ಹೆಚ್ಚುಗೊಳಿಸಲು , ಈ ಕತೆ ಇರುವ ಪುಸ್ತಕವನ್ನು  ಮಕ್ಕಳಿಗೆ ಓದಿ ಹೇಳಿ . ನಂತರ , ನಮ್ಮ ವೆಬ್ಸೈಟ್ ನಲ್ಲಿರುವ ಚಿತ್ರ ಪುಟಗಳನ್ನು ಇಳಿಸಿಕೊಂಡು ಬಣ್ಣ ಹಚ್ಚಿ ಖುಷಿ ಪಡಿ .   
Published 06/21/20
ನರಿ ಮತ್ತು ಡೊಳ್ಳು, ಪಂಚತಂತ್ರದ ಜನಪ್ರಿಯ ಕತೆಗಳಲ್ಲೊಂದು . ಕಾಡಿನಲ್ಲಿ ಬರುತ್ತಿದ್ದ ಸದ್ದು ಯಾವುದೋ ಭಯಂಕರ ಪ್ರಾಣಿಯದೇ ಇರಬೇಕು ಅಂತ ಹೆದರಿಕೆಯಿಂದ ಹೆಜ್ಜೆಯಿಡುತ್ತಿದ್ದ ನರಿಗೆ ಡೊಳ್ಳು ನೋಡಿ ಇಷ್ಟೇನಾ ಅಂತ ಅನ್ನಿಸಿತು . ಆದರೆ , ಡೊಳ್ಳು ಬಡಿಯುತ್ತಿದ್ದವರು ಯಾರು ? ತಿಳಿಯಲು ಕತೆ ಕೇಳಿ      
Published 06/14/20
ನರಿ ಮತ್ತು ಡೊಳ್ಳು, ಪಂಚತಂತ್ರದ ಜನಪ್ರಿಯ ಕತೆಗಳಲ್ಲೊಂದು . ಕಾಡಿನಲ್ಲಿ ಬರುತ್ತಿದ್ದ ಸದ್ದು ಯಾವುದೋ ಭಯಂಕರ ಪ್ರಾಣಿಯದೇ ಇರಬೇಕು ಅಂತ ಹೆದರಿಕೆಯಿಂದ ಹೆಜ್ಜೆಯಿಡುತ್ತಿದ್ದ ನರಿಗೆ ಡೊಳ್ಳು ನೋಡಿ ಇಷ್ಟೇನಾ ಅಂತ ಅನ್ನಿಸಿತು . ಆದರೆ , ಡೊಳ್ಳು ಬಡಿಯುತ್ತಿದ್ದವರು ಯಾರು ? ತಿಳಿಯಲು ಕತೆ ಕೇಳಿ      
Published 06/14/20
" ಇನಿ ದನಿ " - ಸರಕಾರೀ ಹಿರಿಯ ಪ್ರಾಥಮಿಕ ಶಾಲೆ ,ನೆಟ್ಲ  ಮಕ್ಕಳು ನಡೆಸಿಕೊಡುತ್ತಿರುವ ಆಡಿಯೋ ಸರಣಿ .  ಈ ವಾರದ ಕಾರ್ಯಕ್ರಮದಲ್ಲಿ ಮಕ್ಕಳು "ತಾಯಿ ಶಾರದೆ " ಎಂಬ ಪದ್ಯ ,  "ಸರಕಾರೀ ಕನ್ನಡ ಶಾಲೆಯ " ಬಗ್ಗೆ  ಒಂದು ಪುಟ್ಟ  ಕತೆ , ಹಾಗೂ ಕೊನೆಯಲ್ಲಿ ಒಂದು ಸಂಭಾಷಣೆ. "ಅಯ್ಯೋ , ಸರಕಾರೀ ಶಾಲೆಯೇ ? ಅಲ್ಲೇನಿದೆ ? ಅಲ್ಲಿಗೆ ಯಾಕೆ ಮಕ್ಕಳನ್ನು ಕಳಿಸಬೇಕು ?" ಅನ್ನುವ ಈಗಿನ ಪರಿಸ್ಥಿತಿಯಲ್ಲಿ ಈ  ಶಾಲೆಯ ಮಕ್ಕಳು ತೋರಿಸಿರುವ ಕ್ರಿಯಾತ್ಮಕ ಶಕ್ತಿ , ಪ್ರತಿಭೆ ಈ ಆಡಿಯೋ ಸರಣಿಯಲ್ಲಿ ಸ್ಪಷ್ಟವಾಗಿ ಕಾಣಿಸಿದೆ .   "ಎಲ್ಲಾ ಶಾಲೆಗಳಲ್ಲಿ ಇಂತಹ ಕಾರ್ಯಕ್ರಮಗಳು ಇದ್ದರೆ  ಎಷ್ಟು ಚಂದ ? " ಅನ್ನುವ  ಪ್ರತಿಕ್ರಿಯೆಗಳು...
Published 06/07/20